ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
Cross references
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
ಆದದ ರಿಂದ ಕರ್ತನು ನನ್ನ ನೀತಿಯ ಪ್ರಕಾರವೂ ಆತನ ಕಣ್ಣೆದುರಿನಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಬದಲು ಕೊಟ್ಟನು.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಅದು ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ ನಾನು ಅದಕ್ಕೆ ಮೇಲನ್ನು ಮಾಡುತ್ತೇನೆಂದು ಹೇಳಿದ ಒಳ್ಳೇದನ್ನು ಕುರಿತು ಪಶ್ಚಾತ್ತಾಪಪಡುವೆನು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು.
ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ