ಆಗ ಪಶ್ಚಿ ಮದ ಕಡೆಯವರು ಕರ್ತನ ಹೆಸರಿಗೂ ಸೂರ್ಯೋ ದಯದ ಕಡೆಯವರು ಆತನ ಘನಕ್ಕೂ ಭಯಪಡು ವರು. ವೈರಿಯು ಪ್ರಳಯದಂತೆ ಬರುವಾಗ ಕರ್ತನ ಆತ್ಮನು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವನು.
Cross references
ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು.
ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು.