ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
Cross references
ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.
ಅವರು ಅವ ನನ್ನು ಉನ್ನತಸ್ಥಾನದಿಂದ ದೊಬ್ಬುವದನ್ನೇ ಆಲೋಚಿ ಸುತ್ತಾರೆ; ಅವರು ಸುಳ್ಳುಗಳಲ್ಲಿ ಇಷ್ಟ ಪಡುತ್ತಾರೆ. ಅವರು ತಮ್ಮ ಬಾಯಿಂದ ಆಶೀರ್ವದಿಸಿ ಅಂತರಂಗ ದಲ್ಲಿ ಶಪಿಸುತ್ತಾರೆ. ಸೆಲಾ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು.
ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು.
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.