ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
Cross references
ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ
ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.
ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;