ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
Cross references
ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು.
ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣ ಮಾಡಿದ್ದರಿಂದ ಅವನು ಅವರನ್ನು ಕಳುಹಿಸಲಾರದೆ ಹೋದನು.
ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಗುರುತುಗಳನ್ನೂ ಅದ್ಭುತಗಳನ್ನೂ ನಿನ್ನ ಕಣ್ಣುಗಳು ನೋಡಿದವಲ್ಲಾ?
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಅವರು ತಮ್ಮ ಕೊಬ್ಬಿನಿಂದ ಸೊಕ್ಕೇರಿದ್ದಾರೆ; ತಮ್ಮ ಗರ್ವದ ಬಾಯಿ ಯಿಂದ ಮಾತನಾಡುತ್ತಾರೆ.
ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
ವಕ್ರ ಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ; ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು.
ಆದರೆ ಅವರು ಹೋಗಿ ಹಿಂದಕ್ಕೆ ಎಡವಿ ಮುರಿದುಕೊಳ್ಳುವ ಹಾಗೆಯೂ ಬೋನಿನಲ್ಲಿ ಹಿಡಿ ಯಲ್ಪಟ್ಟು ಸಿಕ್ಕಿಬೀಳುವ ಹಾಗೆಯೂ ಕರ್ತನ ವಾಕ್ಯವು ಅವರಿಗೆ ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ ಇರುವದು.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ಕರ್ತನು ನಿಮ್ಮ ಮೇಲೆ ಗಾಢ ನಿದ್ರೆಯ ಆತ್ಮವನ್ನು ಹೊಯಿದು ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾನೆ; ಪ್ರವಾದಿಗಳನ್ನೂ ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನೂ ಮುಚ್ಚಿದ್ದಾನೆ.
ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಯಾಕಂದರೆ ಅವರು ತಮ್ಮ ಕಣ್ಣುಗಳಿಂದ ನೋಡಿ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದಂತೆಯೂ ನಾನು ಅವರನ್ನು ಸ್ವಸ್ಥ ಮಾಡ ದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಕೇಳುವದಕ್ಕೆ ಅವರ ಕಿವಿಗಳು ಮಂದವಾದವು; ಅವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ
ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.