ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Cross references
ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾ ಗಿಯೂ ಅವರಿಂದ ತಕ್ಕೊಳ್ಳುವೆನೆಂದು ಕರ್ತನು ಹೇಳುತ್ತಾನೆ.
ದೂರವಾದವರು ಬಂದು ಕರ್ತನ ದೇವಾ ಲಯವನ್ನು ಕಟ್ಟುವರು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ; ನೀವು ನಿಮ್ಮ ದೇವರಾದ ಕರ್ತನ ಶಬ್ದಕ್ಕೆ ಜಾಗ್ರತೆಯಾಗಿ ಕಿವಿಗೊಟ್ಟರೆ ಇದು ನೆರವೇರುವದು.
ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು.
ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.