ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
Cross references
ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.