ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
Cross references
ಕೂಷನ ಕುಮಾರರು ಯಾರಂದರೆ, ಸೆಬಾ ಹವೀಲ ಸಬ್ತಾ ರಗ್ಮ ಸಬ್ತಕಾ ಎಂಬವರು. ರಗ್ಮನ ಕುಮಾರರು ಯಾರಂದರೆ, ಶೆಬಾ ದೆದಾನ್ ಎಂಬವರು.
ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
ಮಿದ್ಯಾನ್ಯರೂ ಅಮಾಲೇಕ್ಯರೂ ಸಕಲ ಮೂಡ ಣದ ಮಕ್ಕಳೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಇಳು ಕೊಂಡಿದ್ದದರು. ಅವರ ಒಂಟೆಗಳಿಗೆ ಲೆಕ್ಕವಿಲ್ಲ. ಅವು ಸಮುದ್ರದ ಮರಳಿನ ಹಾಗೆ ಗುಂಪಾಗಿದ್ದವು.
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
ಹಾಗೆಯೇ ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮ ವಾದವುಗಳಲ್ಲಿ ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ಕಾಣಿಕೆಯೊಂದಿಗೆ ಅವನನ್ನು ಎದುರುಗೊಳ್ಳಲು ಹೋಗಿ ಅವನ ಮುಂದೆ ಬಂದು ನಿಂತು--ಅರಾಮ್ಯರ ಅರಸನಾಗಿರುವ ನಿನ್ನ ಮಗನಾದ ಬೆನ್ಹದದನು--ಈ ವ್ಯಾಧಿಯಿಂದ ನಾನು ಬದುಕುವೆನೋ ಇಲ್ಲವೋ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಅಂದನು.
ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಅವನು ಬಾಳುವನು; ಅವನಿಗೆ ಶೆಬಾದ ಚಿನ್ನ ವನ್ನು ಕೊಡುವರು; ಅವನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡುವರು; ಪ್ರತಿದಿನ ಅವನನ್ನು ಕೊಂಡಾಡುವರು.
ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಅವರು ಮನೆಯೊಳಕ್ಕೆ ಬಂದಾಗ ಆ ಶಿಶುವನ್ನು ಆತನ ತಾಯಿಯಾದ ಮರಿಯಳೊಂದಿಗೆ ಕಂಡುಕೊಂಡು ಸಾಷ್ಟಾಂಗವೆರಗಿ ಆತನನ್ನು ಆರಾಧಿಸಿದರು; ತರುವಾಯ ತಮ್ಮ ಬೊಕ್ಕಸಗಳನ್ನು ತೆರೆದು ಚಿನ್ನ ಧೂಪ ರಕ್ತಬೋಳಗಳನ್ನು ಆತನಿಗೆ ಕಾಣಿಕೆಯಾಗಿ ಅರ್ಪಿಸಿದರು.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ