ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
Cross references
ಯೆಫೆತನನ್ನು ದೇವರು ವಿಸ್ತರಿಸಲಿ; ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ; ಕಾನಾನನು ಅವನಿಗೆ ದಾಸನಾಗಿರಲಿ ಅಂದನು.
ಯೆಫೆತನ ಕುಮಾರರು ಯಾರಂದರೆ, ಗೋಮೆರ್ ಮಾಗೋಗ್ ಮಾದಯ್ ಯಾವಾನ್ ತೂಬಲ್ ಮೇಷೆಕ್ ತೀರಾಸ್ ಎಂಬವರು.
ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
ಇದಲ್ಲದೆ ನಿನ್ನ ಜನರಾದ ಇಸ್ರಾಯೇಲಿನವ ನಲ್ಲದೆ ನಿನ್ನ ಹೆಸರಿನ ನಿಮಿತ್ತ ದೂರ ದೇಶದಿಂದ ಬಂದ ಪರದೇಶಸ್ಥನನ್ನು ಕುರಿತು ಏನಂದರೆ
ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
ಅರಸನಿಗೆ ತಾರ್ಷೀ ಷಿನ ಹಡಗುಗಳು ಹೀರಾಮನ ಹಡಗುಗಳ ಸಂಗಡ ಸಮುದ್ರದಲ್ಲಿ ಇದ್ದವು. ಮೂರು ವರುಷಕ್ಕೆ ಒಂದು ಸಾರಿ ತಾರ್ಷೀಷಿನ ಹಡಗುಗಳು ಬೆಳ್ಳಿಬಂಗಾರ ವನ್ನೂ ದಂತವನ್ನೂ ಕೋತಿಗಳನ್ನೂ ನವಿಲುಗಳನ್ನೂ ತಕ್ಕೊಂಡು ಬರುತ್ತಿದ್ದವು.
ಯೆಹೋ ಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗು ವದಕ್ಕೆ ತಾರ್ಷೀಷಿನ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ; ಯಾಕಂದರೆ ಆ ಹಡಗು ಗಳು ಎಚ್ಯೋನ್ಗೆಬೆರಿನ ಬಳಿಯಲ್ಲಿ ಒಡೆದುಹೋದವು.
ಪ್ರತಿಯೊಬ್ಬನು ಬೆಳ್ಳಿಯ ತುಂಡುಗಳನ್ನು ಸಮರ್ಪಿಸುವ ವರೆಗೆ ಜನರ ಕರುಗಳ ಸಂಗಡ ಹೋರಿ ಗಳ ಗುಂಪನ್ನು ಭಲ್ಲೆಗಾರರ ಗುಂಪುನ್ನು ಗದರಿಸು. ಕಾಳಗದಲ್ಲಿ ಸಂತೋಷ ಪಡುವ ಜನರನ್ನು ನೀನು ಚದರಿಸು.
ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿಹೊಂದುವದು; ತನ್ನ ತುಟಿಗಳ ಆದಾ ಯದಿಂದ ಅವನು ತೃಪ್ತಿಹೊಂದುವನು.
ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಆ ಕಾಲದಲ್ಲಿ ಯೆರೂಸಲೇಮು ಕರ್ತನ ಸಿಂಹಾಸನವೆಂದು ಕರೆಯಲ್ಪಡುವದು; ಜನಾಂಗಗ ಳೆಲ್ಲಾ ಅದರ ಬಳಿಗೆ ಕರ್ತನ ಹೆಸರಿನ ಬಳಿಗೆ ಮತ್ತು ಯೆರೂಸಲೇಮಿನೊಳಗೆ ಕೂಡಿಸಲ್ಪಡುವವು; ಇನ್ನು ಮೇಲೆ ತಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳರು.
ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.