ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Cross references
ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
ಈಗ ಓ ದೇವರಾದ ಕರ್ತನೇ, ನೀನು ನಿನ್ನ ಬಲದ ಮಂಜೂಷದ ಸಂಗಡ ನಿನ್ನ ವಿಶ್ರಾಂತಿಗೆ ಏರು; ಓ ದೇವರಾದ ಕರ್ತನೇ, ನಿನ್ನ ಯಾಜಕರು ರಕ್ಷಣೆಯನ್ನು ಧರಿಸಿಕೊಳ್ಳಲಿ; ನಿನ್ನ ಪರಿ ಶುದ್ಧರು ಒಳ್ಳೇದರಲ್ಲಿ ಸಂತೋಷಪಡಲಿ.ಓ ದೇವರಾದ ಕರ್ತನೇ, ನಿನ್ನ ಅಭಿಷಿಕ್ತನಿಗೆ ನಿನ್ನ ಮುಖ ವನ್ನು ತಿರುಗಿಸಬೇಡ; ನಿನ್ನ ಸೇವಕನಾದ ದಾವೀದ ನಿಗೆ ಅನುಗ್ರಹಿಸಿದ ಕೃಪೆಗಳನ್ನು ಜ್ಞಾಪಕಮಾಡು ಎಂದು ಬೇಡಿಕೊಂಡನು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
ನಿನ್ನ ವಸ್ತ್ರಗಳೆಲ್ಲಾ ಬೋಳವು ಅಗರು ದಾಲ್ಚಿನ್ನಿ ಇವುಗಳ ಸುವಾಸನೆಯಿಂದ ಇರುತ್ತವೆ. ಇವುಗಳಿಂದ ಅವರು ದಂತದ ಅರಮನೆಗಳೊಳಗಿಂದ ನಿನ್ನನ್ನು ಸಂತೋಷಪಡಿಸುತ್ತಾರೆ.
ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
ಅದರ ಯಾಜಕರಿಗೆ ರಕ್ಷಣೆಯನ್ನೂ ಹೊದಿಸುವೆನು; ಅದರ ಪರಿಶುದ್ಧರು ಗಟ್ಟಿಯಾಗಿ ಉತ್ಸಾಹ ಧ್ವನಿಮಾಡುವರು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು.
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
ಕಡೇದಾಗಿ ನನ್ನ ಸಹೋದರರೇ, ಕರ್ತ ನಲ್ಲಿ ಸಂತೋಷಪಡಿರಿ. ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾ ದರೋ ಅದು ಭದ್ರಪಡಿಸುವದು.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ
ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು.
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು.