ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
Cross references
ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
ಐವತ್ತ ನೆಯ ವರುಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೇ ವರುಷದ ವಾರ್ಷಿಕೋತ್ಸವವಾ ಗಿರಬೇಕು; ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಸ್ವಾಸ್ತ್ಯಕ್ಕೂ ಕುಟುಂಬಕ್ಕೂ ಹಿಂದಿರುಗಿ ಹೋಗಬೇಕು.
ಸಂಭ್ರಮದ ಈ ವರುಷದಲ್ಲಿ ಪ್ರತಿಯೊಬ್ಬನು ತನ್ನ ಸ್ವಾಸ್ತ್ಯಕ್ಕೆ ಹಿಂದಿರುಗಬೇಕು.
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
(ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.