ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
Cross references
ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು.
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.
ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
ಕರ್ತನೇ, ನನ್ನನ್ನು ತಿದ್ದು, ನ್ಯಾಯದಿಂದ ನನ್ನನ್ನು ಇಲ್ಲದಂತೆ ಮಾಡುವ ಹಾಗೆ ನಿನ್ನ ಕೋಪದಲ್ಲಿ ಅಲ್ಲ.ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಆದಾಗ್ಯೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡು ನಿನಗಾಗಿ ನಿತ್ಯವಾದ ಒಡಂಬಡಿಕೆ ಯೊಂದನ್ನು ಸ್ಥಾಪಿಸುವೆನು.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು