ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
Cross references
ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
ನನ್ನ ಬೆಟ್ಟ ಗಳನ್ನೆಲ್ಲಾ ಸಮದಾರಿಯನ್ನಾಗಿ ಮಾಡಿ ನನ್ನ ರಾಜ ಮಾರ್ಗಗಳನ್ನು ಉನ್ನತಪಡಿಸುವೆನು.
ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.
ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.