ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Cross references
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಇಗೋ, ನಿನ್ನ ಅರಸನು ಸಾತ್ವಿಕನು, ಆತನು ಕತ್ತೆಯನ್ನೂ ಕತ್ತೆಯ ಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ ಎಂದು ಚೀಯೋನ್ ಕುಮಾರ್ತೆಗೆ ಹೇಳಿರಿ ಎಂಬದೇ.
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.