ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Cross references
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ಹೌದು, ನಾನೇ ನನ್ನ ಕುರಿಗಳನ್ನು ವಿಚಾರಿಸಿ ಅವುಗಳನ್ನು ಹುಡುಕುತ್ತೇನೆ.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ?
ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;