ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
Cross references
ಬೆಲಗನು ಸತ್ತ ಮೇಲೆ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗನಾದ ಯೋಬಾಬನು ಆಳಿದನು.
ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
ಬೆಟ್ಟಗಳನ್ನು ತನ್ನ ಶಕ್ತಿಯಿಂದ ನಿಲ್ಲಿಸುವಾತನೇ, ಪರಾಕ್ರಮದಿಂದ ನಡುಕಟ್ಟಿಕೊಂಡಾತನೇ,
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.