ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
Cross references
ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.
ಆದರೆ ಹೆಷ್ಬೋನಿನ ಅರಸ ನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಮನಸ್ಸು ಮಾಡಲಿಲ್ಲ; ಯಾಕಂದರೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸುವ ಹಾಗೆ ನಿನ್ನ ದೇವರಾದ ಕರ್ತನು ಅವನ ಬುದ್ಧಿಯನ್ನು ಮಂಕು ಮಾಡಿ ಹೃದಯವನ್ನು ಕಠಿಣಪಡಿಸಿದನೆಂದು ಈಗಾ ಗಲೇ ಪ್ರಸಿದ್ಧವಾಗಿದೆ.
ಅವರು ಯುದ್ಧಮಾಡಲು ಇಸ್ರಾಯೇಲಿಗೆ ಎದುರಾಗಿ ಬರುವ ಹಾಗೆ ಅವರ ಹೃದಯವನ್ನು ಕಠಿಣಮಾಡಿ ಅವರನ್ನು ಸಂಪೂರ್ಣ ನಾಶಮಾಡುವ ಹಾಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರಿಗೆ ದಯೆತೋರಿಸದೆ ಅವರನ್ನು ನಾಶಮಾಡುವ ಹಾಗೆ ಕರ್ತನಿಂದ ಅಪ್ಪಣೆ ಆಗಿತ್ತು.
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ಓ ಸೈನ್ಯಗಳ ದೇವರೇ, ತಿರುಗಿಕೋ ಎಂದು ನಾವು ನಿನ್ನನ್ನು ಬೇಡುತ್ತೇವೆ. ಆಕಾಶದಿಂದ ದೃಷ್ಟಿಸಿ ನೋಡು; ಈ ದ್ರಾಕ್ಷೇಗಿಡವನ್ನೂ
ಕರ್ತನೇ, ಎಷ್ಟರವರೆಗೆ ಹಿಂತಿರುಗದಿರುವಿ? ನಿನ್ನ ಸೇವಕರ ವಿಷಯದಲ್ಲಿ ಅಂತಃಕರಣವಿರಲಿ.
ನನ್ನ ಪೂರ್ಣಹೃದಯದಿಂದ ನಿನ್ನನ್ನು ಹುಡುಕಿದ್ದೇನೆ; ನಿನ್ನ ಆಜ್ಞೆಗಳಿಂದ ನಾನು ತಪ್ಪಿಹೋಗ ದಂತೆ ಮಾಡು.
ಲೋಭದ ಕಡೆಗಲ್ಲ, ನಿನ್ನ ಸಾಕ್ಷಿಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸು.
ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.