ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Cross references
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು.
ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
ಬಂಗಾರವು ಹೇಗೆ ಮುಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧ ಸ್ಥಳದ ಕಲ್ಲುಗಳು ಪ್ರತಿಯೊಂದು ಬೀದಿಯ ಬದಿಯಲ್ಲಿ ಸುರಿಯಲ್ಪಟ್ಟಿವೆ.
ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.