ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
Cross references
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.