Home Bibles ಯೆಶಾಯ 63:6 · ಕನ್ನಡ ಬೈಬಲ್
ಯೆಶಾಯ 63:6 · ಕನ್ನಡ ಬೈಬಲ್

ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.

Cross references

ಯೋಬ 21:20

ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.

ಕೀರ್ತನೆಗಳು 60:3

ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.

ಕೀರ್ತನೆಗಳು 75:8

ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.

ಯೆಶಾಯ 25:10

ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.

ಯೆಶಾಯ 26:5

ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.

ಯೆಶಾಯ 29:9

ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

ಯೆಶಾಯ 49:26

ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಯೆಶಾಯ 51:17

ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.

ಯೆಶಾಯ 51:21

ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,

ಯೆಶಾಯ 63:2

ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

ಯೆರೆಮಿಯ 25:16

ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

ವಿಲಾಪಗಳು 3:15

ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.

ಸೆಫನ್ಯ 3:8

ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 16:6

ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.

ಪ್ರಕಟನೆ 16:19

ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

ಪ್ರಕಟನೆ 18:3

ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

ಪ್ರಕಟನೆ 18:21

ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

Interlinear

Choose Theme