ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
Cross references
ಅವನ ಕಣ್ಣುಗಳು ಅವನ ನಾಶನವನ್ನು ನೋಡುವವು; ಸರ್ವಶಕ್ತನ ಉಗ್ರವನ್ನು ಅವನು ಕುಡಿಯುವನು.
ನಿನ್ನ ಜನರಿಗೆ ಕಠಿಣವಾದವುಗಳನ್ನು ನೀನು ತೋರಿಸಿದ್ದೀ; ವಿಸ್ಮಯದ ದ್ರಾಕ್ಷಾರಸವನ್ನು ನಮಗೆ ಕುಡಿಸಿದ್ದೀ.
ಕರ್ತನ ಕೈಯಲ್ಲಿ ಪಾತ್ರೆಯು ಉಂಟು; ದ್ರಾಕ್ಷಾರಸವು ಕೆಂಪಾಗಿದೆ. ಕಲಬೆರಿಕೆಯಿಂದ ತುಂಬಿ ಅದೆ; ಅದರಿಂದ ಆತನು ಹೊಯ್ಯುತ್ತಾನೆ; ಅದರ ಮಡ್ಡಿಯನ್ನು ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಕರ್ತನ ಕೈಯಿಂದ ಆತನ ಉಗ್ರದ ಪಾತ್ರೆಯನ್ನು ಕುಡಿದ ಓ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು; ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.
ನೀನು ಹಿಂಸೆಗೊಳ ಗಾಗಿದ್ದೀ ಮತ್ತು ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ, ಆದದರಿಂದ ಈಗ ಇದನ್ನು ಕೇಳು,
ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.
ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.