Home Bibles ಯೆಶಾಯ 63:9 · ಕನ್ನಡ ಬೈಬಲ್
ಯೆಶಾಯ 63:9 · ಕನ್ನಡ ಬೈಬಲ್

ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

Cross references

ಆದಿಕಾಂಡ 22:11

ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.

ಆದಿಕಾಂಡ 48:16

ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್‌ ಇಸಾಕ್‌ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.

ನಿರ್ಗಮಕಾಂಡ 3:7

ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ನಿರ್ಗಮಕಾಂಡ 14:19

ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ನಿರ್ಗಮಕಾಂಡ 15:13

ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.

ನಿರ್ಗಮಕಾಂಡ 19:4

ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;

ನಿರ್ಗಮಕಾಂಡ 23:20

ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.

ನಿರ್ಗಮಕಾಂಡ 33:14

ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.

ದ್ವಿತೀಯೋಪದೇಶಕಾಂಡ 1:31

ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.

ದ್ವಿತೀಯೋಪದೇಶಕಾಂಡ 7:7

ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.

ದ್ವಿತೀಯೋಪದೇಶಕಾಂಡ 7:8

ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.

ದ್ವಿತೀಯೋಪದೇಶಕಾಂಡ 32:10

ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.

ದ್ವಿತೀಯೋಪದೇಶಕಾಂಡ 32:11

ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ

ದ್ವಿತೀಯೋಪದೇಶಕಾಂಡ 32:12

ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.

ನ್ಯಾಯಾಧಿಪತಿಗಳು 10:16

ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

ಕೀರ್ತನೆಗಳು 25:22

ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.

ಕೀರ್ತನೆಗಳು 78:38

ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.

ಕೀರ್ತನೆಗಳು 106:7

ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.

ಯೆಶಾಯ 43:1

ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಯೆಶಾಯ 46:3

ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--

ಹೊಶೇಯ 1:7

ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.

ಹೊಶೇಯ 12:3

ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.

ಜೆಕರ್ಯ 2:8

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.

ಮಲಾಕಿ 3:1

ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.

ಮತ್ತಾಯ 25:40

ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

ಮತ್ತಾಯ 25:45

ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.

ಲೂಕ 15:5

ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.

ಅಪೋಸ್ತಲರ ಕೃತ್ಯಗಳು 7:30

ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.

ಅಪೋಸ್ತಲರ ಕೃತ್ಯಗಳು 7:34

ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 7:38

ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.

ಅಪೋಸ್ತಲರ ಕೃತ್ಯಗಳು 9:4

ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.

ಅಪೋಸ್ತಲರ ಕೃತ್ಯಗಳು 12:11

ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.

1 ಕೊರಿಂಥದವರಿಗೆ 10:9

ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಹೆಬ್ರಿಯರಿಗೆ 2:18

ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

ಹೆಬ್ರಿಯರಿಗೆ 4:15

ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.

1 ಯೋಹಾನ 4:9

ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.

ಪ್ರಕಟನೆ 1:5

ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

ಪ್ರಕಟನೆ 5:9

ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;

Interlinear

Choose Theme