ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
Cross references
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ.
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.
ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
ನಮ್ಮ ತಂದೆಗಳು ಐಗುಪ್ತದಲ್ಲಿ ನಿನ್ನ ಅದ್ಭುತಗಳನ್ನು ತಿಳಿಯದೆ ನಿನ್ನ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ, ಅಂದರೆ ಕೆಂಪು ಸಮುದ್ರದ ಹತ್ತಿರ ನಿನಗೆ ತಿರುಗಿ ಬಿದ್ದರು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
ಆಗ ಪೇತ್ರನು ಎಚ್ಚರವಾಗಿ-- ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯ ಜನರು ನನಗೆ ಮಾಡಬೇಕೆಂದಿದ್ದ ಎಲ್ಲವುಗಳಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಶ್ಚಯವಾಗಿ ತಿಳಿದುಬಂದಿದೆ ಅಂದುಕೊಂಡನು.
ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.
ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು.ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;