ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
Cross references
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
ನೀನು ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ತಪ್ಪಿಸಲಿ; ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವದು; ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವದು; ಆದರೆ ನನ್ನಲ್ಲಿ ನಂಬಿಕೆ ಇಡುವವನು ದೇಶವನ್ನು ವಶಮಾಡಿ ಕೊಂಡು ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ.
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.