Home Bibles ಯೆಶಾಯ 65:12 · ಕನ್ನಡ ಬೈಬಲ್
ಯೆಶಾಯ 65:12 · ಕನ್ನಡ ಬೈಬಲ್

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

Cross references

ಲೇವ್ಯಕಾಂಡ 26:25

ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.

ದ್ವಿತೀಯೋಪದೇಶಕಾಂಡ 32:25

ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.

2 ದಿನವೃತ್ತಾಂತ 36:15

ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

ಸಾಮೇತಿಗಳು 1:24

ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

ಯೆಶಾಯ 1:16

ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

ಯೆಶಾಯ 3:25

ನಿನ್ನ ಗಂಡಸರು ಕತ್ತಿಯಿಂದಲೂ ನಿನ್ನ ಶೂರರು ಯುದ್ಧದಲ್ಲಿಯೂ ಬೀಳುವರು.ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.

ಯೆಶಾಯ 10:4

ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

ಯೆಶಾಯ 27:1

ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.

ಯೆಶಾಯ 41:28

ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.

ಯೆಶಾಯ 50:2

ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.

ಯೆಶಾಯ 59:15

ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.

ಯೆಶಾಯ 65:3

ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;

ಯೆಶಾಯ 66:3

ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.

ಯೆಶಾಯ 66:4

ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

ಯೆರೆಮಿಯ 7:13

ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.

ಯೆರೆಮಿಯ 16:17

ನೀನು ನನಗೆ ಭಯಾಸ್ಪದವಾಗಬೇಡ; ಕೆಟ್ಟ ದಿನದಲ್ಲಿ ನೀನೇ ನನ್ನ ನಿರೀಕ್ಷೆಯು.

ಯೆರೆಮಿಯ 34:17

ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.

ಯೆರೆಮಿಯ 35:17

ಅವರು ಬಾರೂಕ ನಿಗೆ--ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದದ್ದನ್ನು ನಮಗೆ ತಿಳಿಸು ಅಂದರು.

ಯೆಹೆಜ್ಕೇಲ 14:17

ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ

ಸೆಫನ್ಯ 1:4

ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚಿ ಈ ಸ್ಥಳದಿಂದ ಬಾಳನ ಉಳಿದವುಗಳನ್ನೂ ಯಾಜಕರ ಸಂಗಡ ಕೆಮಾರ್ಯರ ಹೆಸರನ್ನೂ

ಜೆಕರ್ಯ 7:7

ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.

ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಜೆಕರ್ಯ 7:12

ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.

ಮತ್ತಾಯ 21:34

ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

ಮತ್ತಾಯ 22:3

ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು.

ಮತ್ತಾಯ 22:7

ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

ಯೋಹಾನ 1:11

ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.

Interlinear

Choose Theme