ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
Cross references
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.