ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
Cross references
ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ಆ ಕ್ರಯಪತ್ರವನ್ನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆಯೂ ಕ್ರಯಪತ್ರ ದಲ್ಲಿ ರುಜು ಹಾಕಿದ ಸಾಕ್ಷಿಗಳ ಮುಂದೆಯೂ ಸೆರೆ ಮನೆಯ ಅಂಗಳದಲ್ಲಿ ಕೂತುಕೊಂಡಿದ್ದ ಯೆಹೂದ್ಯ ರೆಲ್ಲರ ಮುಂದೆಯೂ ಮಹ್ಸೇಮನ ಮಗನಾದ ನೇರೀ ಯನ ಮಗನಾದ ಬಾರೂಕನಿಗೆ ಕೊಟ್ಟೆನು.
ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ.
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.