ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
Cross references
ನನ್ನ ಯಜ್ಞವೇದಿಯನ್ನು ಮಣ್ಣಿನಿಂದ ಮಾಡ ಬೇಕು. ಅದರ ಮೇಲೆ ನಿನ್ನ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಗಳನ್ನೂ ಎತ್ತುಗಳನ್ನೂ ಅರ್ಪಿಸಬೇಕು; ನನ್ನ ಹೆಸರನ್ನು ಜ್ಞಾಪಕಮಾಡುವ ಎಲ್ಲಾ ಸ್ಥಳಗಳಲ್ಲಿ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.
ನೀನು ಧೂಪ ಸುಡುವ ವೇದಿಯನ್ನು ಮಾಡಬೇಕು; ಜಾಲೀ ಮರದಿಂದ ಅದನ್ನು ಮಾಡಬೇಕು.
ಇಸ್ರಾಯೇಲ್ ಮಕ್ಕಳು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಕರ್ತನಿಗೆ ಸಭೆಯ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಕರ್ತನಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.
ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.
ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.