ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
Cross references
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.
ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;