ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
Cross references
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿದ್ದನ್ನು ಕಂಡಿಯಾ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ದಿವಸಗಳಲ್ಲಿ ಆ ಕೇಡನ್ನು ಬರಮಾಡದೆ ಅವನ ಮಗನ ದಿವಸಗಳಲ್ಲಿ ಅವನ ಮನೆಯ ಮೇಲೆ ಬರ ಮಾಡುವೆನು ಅಂದನು.
ಇದಲ್ಲದೆ ಲೇಖಕನಾದ ಶಾಫಾನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆಂದು ತೋರಿಸಿದನು; ಶಾಫಾ ನನು ಅದನ್ನು ಅರಸನ ಮುಂದೆ ಓದಿದನು.
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ಈ ಸ್ಥಳಕ್ಕೂ ಅದರ ನಿವಾಸಿಗಳಿಗೂ ವಿರೋಧವಾಗಿ ಅವರು ನಾಶವೂ ಶಾಪವೂ ಆಗುವದೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ನಿನ್ನನ್ನು ಕರ್ತನ ಮುಂದೆ ತಗ್ಗಿಸಿ ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದನ್ನು ನಾನೇ ಕೇಳಿದ್ದೇನೆಂದು ಕರ್ತನು ಹೇಳುತ್ತಾನೆ.ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
ನೀನು ಈ ಸ್ಥಳಕ್ಕೆ ವಿರೋಧ ವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ ನಿನ್ನ ಹೃದಯವು ಮೆತ್ತಗಾಗಿ ನೀನು ಆತನ ಮುಂದೆ ನಿನ್ನನ್ನು ತಗ್ಗಿಸಿಕೊಂಡಿ. ನಿನ್ನನ್ನು ನನ್ನ ಮುಂದೆ ತಗ್ಗಿಸಿ ಕೊಂಡು ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಮುಂದೆ ಅತ್ತದ್ದರಿಂದ ನಾನು ಅವನ ಮೊರೆಯನ್ನು ಕೇಳಿದೆನೆಂದು ಕರ್ತನು ಹೇಳುತ್ತಾನೆ.
ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
ಮುರಿದ ಮನಸ್ಸೇ ದೇವರ ಯಜ್ಞಗಳು. ಓ ದೇವರೇ, ಪಶ್ಚಾತ್ತಾಪದಿಂದ ಜಜ್ಜಿ ಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ.
ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
ನಿನ್ನ ಹೆದರಿಕೆಯಿಂದ ನನ್ನ ಶರೀರವು ನಡುಗುತ್ತದೆ. ನಾನು ನಿನ್ನ ತೀರ್ಪುಗಳಿಗೆ ಭಯಪಡುತ್ತೇನೆ.
ಪ್ರಧಾನರು ಕಾರಣವಿಲ್ಲದೆ ನನ್ನನ್ನು ಹಿಂಸಿಸು ತ್ತಾರೆ. ನನ್ನ ಹೃದಯವು ನಿನ್ನ ವಾಕ್ಯಗಳಿಗೆ ಮಾತ್ರ ಭಯಪಡುತ್ತದೆ.
ಕರ್ತನು ಉನ್ನತನಾಗಿದ್ದರೂ ದೀನನನ್ನು ಗಮನಿ ಸುತ್ತಾನೆ. ಆದರೆ ಗರ್ವಿಷ್ಟನನ್ನು ದೂರದಿಂದ ತಿಳು ಕೊಳ್ಳುತ್ತಾನೆ.
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
ಆಲೋಚನೆ ಯಲ್ಲಿ ದೊಡ್ಡವನು ಕ್ರಿಯೆಯಲ್ಲಿ ಬಲಿಷ್ಠನು; ನಿನ್ನ ಕಣ್ಣುಗಳು ಮನುಷ್ಯರ ಮಕ್ಕಳ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರ ವಾಗಿಯೂ ಅವನವನ ಕ್ರಿಯೆಗಳ ಫಲದ ಪ್ರಕಾರ ವಾಗಿಯೂ ಕೊಡುವ ಹಾಗೆ ತೆರೆದವೆ.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
ಆಗ ಅವನು ದೀಪ ತರಬೇಕೆಂದು ಹೇಳಿ ಒಳಕ್ಕೆ ಹಾರಿ ನಡುಗುತ್ತಾ ಪೌಲ ಸೀಲರ ಮುಂದೆ ಬಿದ್ದನು.
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.
ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.