ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
Cross references
ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.
ಹಂದಿಯನ್ನು ತಿನ್ನಬಾರದು. ಅದು ಗೊರಸೆ ಭೇದಿಸಿದರೂ ಮೆಲುಕು ಹಾಕುವದಿಲ್ಲ; ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು.
ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ?
ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
ಆ ದಿವಸದಲ್ಲಿ ಇಸ್ರಾ ಯೇಲಿನಲ್ಲಿ ಅರಸನು ಇರಲಿಲ್ಲ; ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡಿದನು.
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ತೋಟಗಳ ಮಧ್ಯದಲ್ಲಿ ಒಂದು ಮರದ ಹಿಂದೆ ತಮ್ಮನ್ನು ಪರಿಶುದ್ಧ ಮಾಡಿ ಕೊಂಡು ಪವಿತ್ರಮಾಡಿಕೊಳ್ಳುವವರೂ ಹಂದಿ ಮಾಂಸವನ್ನೂ ಅಸಹ್ಯವಾದದ್ದನ್ನೂ ಇಲಿಯನ್ನೂ ತಿನ್ನು ವವರೂ ಒಟ್ಟಾಗಿ ದಹಿಸಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ.
ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.