ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
Cross references
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.
ಇವರು ಯಾವಾಗಲೂ ನನ್ನ ಮುಖದೆ ದುರಿಗೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು; ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಯಜ್ಞವೇದಿಯ ಮೇಲೆ ಧೂಪ ಸುಡುವರು;
ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.