ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
Cross references
ಆದರೆ ಆಹಾಜನು ಅಶ್ಶೂರಿನ ಅರಸನಾದ ತಿಗ್ಲತ್ಪಿಲೇ ಸೆರನಿಗೆ--ನಾನು ನಿನ್ನ ಸೇವಕನೂ ನಿನ್ನ ಮಗನೂ ಆಗಿದ್ದೇನೆ; ನನಗೆ ವಿರೋಧವಾಗಿ ಎದ್ದ ಅರಾಮ್ಯರ ಅರಸನ ಕೈಗೂ ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ ರಕ್ಷಿಸುವ ಹಾಗೆ ಬರ ಹೇಳು ಅಂದನು.
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
ಆಗ ಅಶ್ಶೂರಿನ ಅರಸನಾದ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು ಅವನನ್ನು ಬಲಪಡಿಸದೆ ಬಾಧೆಪಡಿಸಿ ದನು.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.
ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಆಶ್ಚರ್ಯಪಟ್ಟು ಒಬ್ಬರ ಸಂಗಡ ಒಬ್ಬರು ತಮ್ಮ ಅಕ್ರಮಗಳಿಗಾಗಿ ಕ್ಷಯಿಸಿ ಹೋಗುವರು.
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.