ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.
Cross references
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ಆಗ ದಾವೀದನು ಸೌಲನಿಗೆ--ಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು; ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು.
ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೇ ವರುಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಆಳಲು ಆರಂಭಿಸಿ ಇಪ್ಪತ್ತು ವರುಷ ಆಳಿದನು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.
ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
ಐಗುಪ್ತ್ಯರ ಸಹಾಯವು ವ್ಯರ್ಥವೇ ವ್ಯರ್ಥ. ಆದದರಿಂದ ಇದನ್ನು ಕುರಿತು ಅವರ ಬಲವು ನಿಂತುಹೋಗಿದೆ ಎಂದು ನಾನು ಕೂಗಿದ್ದೇನೆ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಮನುಷ್ಯನು ನಿರೀಕ್ಷೆಯಿಂದ ಮೌನವಾಗಿ ಕರ್ತನ ರಕ್ಷಣೆಗಾಗಿ ಕಾಯು ವದು ಒಳ್ಳೆಯದು.
ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.