ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
Cross references
ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ಆದರೆ ಅರಸನಾದ ಯೆಹೋರಾಮನಿಗೆ ಮಗಳಾದ ಯೆಹೋಷೆಬಳು ಕೊಂದುಹಾಕಲ್ಪಟ್ಟ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೆಹೋವಾಷ ನನ್ನು ಕದ್ದುಕೊಂಡಳು. ಆದದರಿಂದ ಅವನು ಕೊಲ್ಲಲ್ಪ ಡದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯ ಳಿಗೆ ಕಾಣದ ಹಾಗೆ ಮಲಗುವ ಮನೆಯಲ್ಲಿ ಬಚ್ಚಿಟ್ಟಳು.
ಈಗ ದಾವೀದನ ಕುಮಾರರ ಕೈಯಲ್ಲಿರುವ ಕರ್ತನ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿ ಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೋಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
ಆದದರಿಂದ ಅವನ ದೇವರಾದ ಕರ್ತನು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದನು. ಅರಾಮ್ಯರು ಅವನನ್ನು ಹೊಡೆದು ಅವರಲ್ಲಿ ಅನೇಕರನ್ನು ಸೆರೆ ಯಾಗಿ ಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ ಇವನು ಇಸ್ರಾಯೇಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪ ಟ್ಟದ್ದರಿಂದ ಅವನು ಇವನನ್ನು ಹೊಡೆದು ದೊಡ್ಡ ಸಂಹಾರ ಮಾಡಿದನು.
ಅವರು ನಿನಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು; ಪೂರೈಸಲಾ ರದ ಯುಕ್ತಿಯನ್ನು ಕಲ್ಪಿಸಿದರು.
ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ.
ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ