ಸೈನ್ಯಗಳ ಕರ್ತನನ್ನೇ ಪ್ರತಿಷ್ಠೆಪಡಿಸಿ ಕೊಳ್ಳಿರಿ; ಆತನೇ ನಿಮ್ಮ ಭಯವೂ ಭಯಂಕರನೂ ಆಗಿರಲಿ.
Cross references
ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ನೀವು ಜಿನ್ ಎಂಬ ಮರುಭೂಮಿಯ ಲ್ಲಿಯೂ ಸಭೆಯ ವಾಗ್ವಾದದಲ್ಲಿಯೂ ಅವರಿಗೆದು ರಾಗಿ ನೀರಿನ ಬಳಿಯಲ್ಲಿ ನನ್ನನ್ನು ಪರಿಶುದ್ಧ ಮಾಡದೆ ನನ್ನ ಆಜ್ಞೆಯನ್ನು ವಿಾರಿದಿರಿ. ಆ ನೀರು ಅಂದರೆ ಜಿನ್ ಎಂಬ ಅರಣ್ಯದ ಕಾದೇಶಿನಲ್ಲಿರುವ ಮೆರೀಬಾದ ನೀರು ಅಂದನು.
ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ನೋಡುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ ಯಾಕೋಬನ ಪರಿ ಶುದ್ಧನನ್ನು ಪ್ರತಿಷ್ಠಿಸುವರು; ಇಸ್ರಾಯೇಲಿನ ದೇವ ರಿಗೆ ಭಯಪಡುವರು.ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.