ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.
Cross references
ಇಸ್ರಾಯೇಲ್ ಮಕ್ಕಳು ಐಗುಪ್ತದೊಳಗಿಂದ ಹೊರಟ ಮೇಲೆ
ಆಗ ಅವನು ಅರಸನ ಮಗನನ್ನು ಹೊರಗೆ ಕರತಂದು ಕಿರೀಟವನ್ನು ಅವನ ತಲೆಯ ಮೇಲೆ ಇರಿಸಿ ಸಾಕ್ಷಿಯನ್ನು ಕೊಟ್ಟನು. ಅವರು ಅವನನ್ನು ಅರಸನಾಗ ಮಾಡಿ ಅಭಿಷೇಕಿಸಿ ಚಪ್ಪಾಳೆ ಹೊಡೆದುಅರಸನು ಬಾಳಲಿ ಅಂದರು.
ಕರ್ತನ ಗುಟ್ಟು ಆತ ನಿಗೆ ಭಯಪಡುವವರೊಂದಿಗೆ ಅದೆ; ತನ್ನ ಒಡಂಬಡಿಕೆ ಯನ್ನು ಆತನು ಅವರಿಗೆ ತಿಳಿಸುವನು.
ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು.
ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ.
ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
ಆ ಏಳು ಗುಡುಗುಗಳು ತಮ್ಮ ಧ್ವನಿಕೊಟ್ಟಾಗ ನಾನು ಬರೆಯ ಬೇಕೆಂದಿದ್ದೆನು. ಅದಕ್ಕೆ--ಆ ಏಳು ಗುಡುಗುಗಳು ನುಡಿದವುಗಳನ್ನು ನೀನು ಬರೆಯದೆ ಮುದ್ರಿಸು ಎಂದು ಪರಲೋಕದಿಂದ ಬಂದ ಶಬ್ದವು ನನಗೆ ಹೇಳುವದನ್ನು ಕೇಳಿದೆನು.
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ