ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
Cross references
ಓ ಕರ್ತನೇ, ನಿನ್ನ ರಕ್ಷಣೆಗಾಗಿ ನಾನು ಕಾದಿದ್ದೇನೆ.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ.
ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
ಕರ್ತನನ್ನು ನಿರೀಕ್ಷಿಸು, ಆತನ ಮಾರ್ಗವನ್ನು ಕೈಕೊಳ್ಳು; ಆಗ ಭೂಮಿಯನ್ನು ಸ್ವಾಧೀ ನಮಾಡಿಕೊಳ್ಳುವ ಹಾಗೆ ನಿನ್ನನ್ನು ಆತನು ಎತ್ತು ವನು; ದುಷ್ಟರು ಕಡಿದುಹಾಕಲ್ಪಟ್ಟಾಗ ನೀನು ಅದನ್ನು ನೋಡುವಿ.
ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಆ ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
ಕರ್ತನು ನಿಮ್ಮ ಹೃದಯಗಳನ್ನು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನಿಗಾಗಿ ತಾಳ್ಮೆಯಿಂದ ಕಾದು ಕೊಂಡಿರುವ ಹಾಗೆಯೂ ನಡಿಸಲಿ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.