ಇಗೋ, ನನಗೆ ಕರ್ತನು ದಯಪಾಲಿಸಿದ ಮಕ್ಕಳೂ ನಾನೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೈನ್ಯಗಳ ಕರ್ತನಿಂದುಂಟಾದ ಗುರುತುಗಳಾಗಿಯೂ ಅದ್ಭುತ ಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.
Cross references
ಅವರು ಯುಗ ಯುಗಾಂತರಕ್ಕೂ ಇಸ್ರಾಯೇಲಿನಲ್ಲಿ ವಾಸಿಸುವ ಹಾಗೆ ಇಸ್ರಾಯೇಲಿನ ದೇವರಾದ ಕರ್ತನು ತನ್ನ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಎಂದು ದಾವೀದನು ಹೇಳಿ
ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
ಒಂದು ಸಂತಾನವು ಆತನನ್ನು ಸೇವಿಸುವದು. ಅದು ಕರ್ತನ ಸಂತತಿ ಎಂದು ಎಣಿಸ ಲ್ಪಡುವದು.ಅವರು ಬಂದು ಆತನೇ ಇದನ್ನು ಮಾಡಿದ್ದಾನೆಂದೂ ಆತನ ನೀತಿಯನ್ನೂ ಹುಟ್ಟಲಿರುವ ಜನರಿಗೆ ತಿಳಿಸುವರು.
ಅನೇಕರಿಗೆ ನಾನು ಆಶ್ಚರ್ಯದಂತಿದ್ದೇನೆ. ಆದರೆ ನೀನು ನನ್ನ ಬಲವಾದ ಆಶ್ರಯವಾಗಿದ್ದೀ.
ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--
ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಾನು ಆ ಮನುಷ್ಯನ ಮೇಲೆ ಉಗ್ರಕೋಪಗೊಂಡು ಅವು ನನ್ನ ಗುರುತನ್ನಾಗಿಯೂ ಗಾದೆಯನ್ನಾಗಿಯೂ ಮಾಡಿಕೊಂಡು ನನ್ನ ಜನರ ಮಧ್ಯದೊಳಗಿಂದ ಕಡಿದು ಬಿಡುವೆನು; ನಾನೇ ಕರ್ತನೆಂದು ತಿರಿಗಿ ತಿಳಿದುಕೊಳ್ಳು ವಿರಿ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು.
ಕುರುಬರು ಹೇಳಿದ ವಿಷಯ ಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
ಕೆಲವು ಸಾರಿ ನೀವು ಎರಡನ್ನು ಅಂದರೆ ನಿಂದೆಗಳನ್ನೂ ಉಪ ದ್ರವಗಳನ್ನೂ ಅನುಭವಿಸಿ ಹಾಸ್ಯದ ನೋಟಕ್ಕೆ ಗುರಿ ಯಾದಿರಿ; ಕೆಲವು ಸಾರಿ ಅಂಥವುಗಳನ್ನು ಅನುಭವಿಸು ವವರ ಜೊತೆಗಾರರಾದಿರಿ.
ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ