ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
Cross references
ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಆ ಸೇವಕನು ತನ್ನ ಬಳಿಗೆ ಬಂದು--ಇಗೋ, ಈ ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.
ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು.
ಆದರೆ ನಿನ್ನ ಕೈಚಾಚಿ ಅವನ ಎಲುಬನ್ನೂ ಅವನ ಮಾಂಸವನ್ನೂ ಮುಟ್ಟಿದರೆ ಅವನು ನಿನ್ನ ಎದುರಿನಲ್ಲಿ ನಿನ್ನನ್ನು ಶಪಿಸುವನು ಅಂದನು.
ಆಗ ಅವನ ಹೆಂಡತಿಯು ಅವನಿಗೆ--ಇನ್ನೂ ಯಥಾರ್ಥ ತ್ವದಲ್ಲಿ ಉಳಿದಿದ್ದೀಯೋ? ದೇವರನ್ನು ಶಪಿಸಿ ಸಾಯಿ ಅಂದಳು.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ
ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.
ಈ ಉಪದ್ರವಗಳಿಂದ ಕೊಲ್ಲಲ್ಪಡದೆ ಉಳಿದ ಮನುಷ್ಯರು ದೆವ್ವಗಳನ್ನೂ ಬಂಗಾರದ ವಿಗ್ರಹಗಳನ್ನೂ ಬೆಳ್ಳಿಯ, ಹಿತ್ತಾಳೆಯ, ಕಲ್ಲಿನ ಮತ್ತು ಮರದ ವಿಗ್ರಹ ಗಳನ್ನೂ ಅಂದರೆ ನೋಡಲಾರದ ಕೇಳಲಾರದ ಇಲ್ಲವೆ ನಡೆಯಲಾರದವುಗಳನ್ನು ಆರಾಧಿಸದಂತೆ ಮಾನ ಸಾಂತರಪಡದೆ ಹೋದರು.ಇದಲ್ಲದೆ ತಾವು ಮಾಡುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳಿ ಗಾಗಿಯೂ ಮಾನಸಾಂತರಪಡಲಿಲ್ಲ.
ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.