ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.
Cross references
ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.
ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.
ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.
ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.