Home Bibles ಯಾಕೋಬ 1:15 · ಕನ್ನಡ ಬೈಬಲ್
ಯಾಕೋಬ 1:15 · ಕನ್ನಡ ಬೈಬಲ್

ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ.

Cross references

ಆದಿಕಾಂಡ 2:17

ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು.

ಆದಿಕಾಂಡ 3:6

ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.

ಆದಿಕಾಂಡ 3:17

ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

ಆದಿಕಾಂಡ 4:5

ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು.

ಯೋಬ 15:35

ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.

ಕೀರ್ತನೆಗಳು 7:14

ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

ಕೀರ್ತನೆಗಳು 9:17

ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.

ಯೆಶಾಯ 59:4

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ಮೀಕ 2:1

ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.

ಮತ್ತಾಯ 26:14

ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--

ಮತ್ತಾಯ 26:48

ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು.

ಅಪೋಸ್ತಲರ ಕೃತ್ಯಗಳು 5:1

ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ

ರೋಮಾಪುರದವರಿಗೆ 5:12

ಈ ವಿಷಯ ಹೇಗಂದರೆ, ಒಬ್ಬ ಮನುಷ್ಯ ನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕ ದೊಳಗೆ ಸೇರಿದವು; ಎಲ್ಲರೂ ಪಾಪಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.

ರೋಮಾಪುರದವರಿಗೆ 6:21

ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.

ಪ್ರಕಟನೆ 20:14

ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.

Interlinear

Choose Theme