ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
Cross references
ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.
ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
ಸೀಮೋನ್ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.
ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.
ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.
ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.
ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.
ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.