Home Bibles ಯಾಕೋಬ 1:21 · ಕನ್ನಡ ಬೈಬಲ್
ಯಾಕೋಬ 1:21 · ಕನ್ನಡ ಬೈಬಲ್

ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.

Cross references

ಕೀರ್ತನೆಗಳು 25:9

ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು.

ಯೆಶಾಯ 2:20

ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.

ಯೆಶಾಯ 29:19

ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.

ಯೆಶಾಯ 30:22

ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.

ಯೆಶಾಯ 61:1

ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ

ಯೆಹೆಜ್ಕೇಲ 18:31

ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಸೆಫನ್ಯ 2:3

ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.

ಮತ್ತಾಯ 5:5

ಸಾತ್ವಿಕರು ಧನ್ಯರು; ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು.

ಯೋಹಾನ 6:63

ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.

ಯೋಹಾನ 6:68

ಸೀಮೋನ್‌ ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳು ಉಂಟಲ್ಲಾ.

ಅಪೋಸ್ತಲರ ಕೃತ್ಯಗಳು 10:33

ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಅಪೋಸ್ತಲರ ಕೃತ್ಯಗಳು 13:26

ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.

ರೋಮಾಪುರದವರಿಗೆ 1:16

ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

ರೋಮಾಪುರದವರಿಗೆ 6:17

ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.

ರೋಮಾಪುರದವರಿಗೆ 11:17

ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.

ರೋಮಾಪುರದವರಿಗೆ 13:12

ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

1 ಕೊರಿಂಥದವರಿಗೆ 15:2

ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.

2 ಕೊರಿಂಥದವರಿಗೆ 7:1

ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.

ಎಫೆಸದವರಿಗೆ 1:13

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಎಫೆಸದವರಿಗೆ 4:22

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.

ಎಫೆಸದವರಿಗೆ 5:4

ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.

ಕೊಲೊಸ್ಸೆಯವರಿಗೆ 3:5

ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ.

1 ತೆಸಲೋನಿಕದವರಿಗೆ 1:5

ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.

1 ತೆಸಲೋನಿಕದವರಿಗೆ 2:13

ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.

2 ತಿಮೋಥೆಯ 3:15

ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಹೆಬ್ರಿಯರಿಗೆ 4:2

ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಹೆಬ್ರಿಯರಿಗೆ 12:1

ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು

ಯಾಕೋಬ 4:8

ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

1 ಪೇತ್ರ 1:9

ನಿಮ್ಮ ನಂಬಿಕೆಯ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.

1 ಪೇತ್ರ 2:1

ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.

1 ಪೇತ್ರ 2:11

ಅತಿ ಪ್ರಿಯರೇ, ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿ ರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

Interlinear

Choose Theme