ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Cross references
ನಿಮ್ಮ ಹೃದಯವು ಮರುಳುಗೊಳ್ಳದ ಹಾಗೆಯೂ ನೀವು ಓರೆಯಾಗಿ ಹೋಗಿ ಬೇರೆ ದೇವರುಗಳನ್ನು ಸೇವಿಸಿ ಅಡ್ಡಬೀಳದ ಹಾಗೆಯೂ
ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
ಆತನು ತನ್ನ ಹಗ್ಗವನ್ನು ಸಡಲಿಸಿ ನನ್ನನ್ನು ಶ್ರಮೆ ಪಡಿಸುತ್ತಾನೆ; ನನ್ನ ಮುಖದ ಮುಂದೆ ಕಡಿವಾಣಕಿತ್ತು ಬಿಡುತ್ತಾರೆ;
ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.
ಓ ಕರ್ತನೇ, ನನ್ನ ಬಾಯಿಗೆ ಕಾವ ಲಿಡು; ನನ್ನ ತುಟಿಗಳ ಕದವನ್ನು ಕಾಯಿ. ಅಪರಾಧ ಮಾಡುವ ಮನುಷ್ಯರ ಸಂಗಡ ದುಷ್ಟತ್ವದಿಂದ ಕರ್ಮಗಳನ್ನು ನಡಿಸುವ ಕೆಟ್ಟ ಕಾರ್ಯಕ್ಕೆ
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು.
ಒಬ್ಬ ಮನುಷ್ಯನಿಗೆ ಸರಿಯೆಂದು ತೋರುವ ಮಾರ್ಗ ವಿದೆ. ಅದರ ಅಂತ್ಯವು ಮರಣದ ಮಾರ್ಗಗಳೇ.
ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
ಅರಸನ ತುಟಿ ಗಳಲ್ಲಿ ದೈವೋಕ್ತಿ; ನ್ಯಾಯತೀರ್ಪಿನಲ್ಲಿ ಅವನ ಬಾಯಿ ಯು ದೋಷಮಾಡುವದಿಲ್ಲ.
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು; ಅದರ ಅಂತ್ಯವು ಮರಣದ ಮಾರ್ಗವೇ.
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ.
ಆದದರಿಂದ ನೀವು ಕೇಳುವವುಗಳ ವಿಷಯದಲ್ಲಿ ಎಚ್ಚರಿಕೆ ತಂದುಕೊಳ್ಳಿರಿ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನಿಗೆ ತನಗೆ ಉಂಟೆಂದು ನೆನಸುವದನ್ನೂ ಅವನಿಂದ ತೆಗೆಯಲ್ಪ ಡುವದು ಎಂದು ಹೇಳಿದನು.
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.
ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.