ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
Cross references
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ನೋಡಬೇಡಿರಿ; ಹಿರಿಯನನ್ನು ಹೇಗೋ, ಹಾಗೆಯೇ ಕಿರಿಯನನ್ನು ಕೇಳಬೇಕು; ಮನುಷ್ಯನ ಮುಖವನ್ನು ನೋಡಿ ಹೆದರಬೇಡಿರಿ; ಯಾಕಂದರೆ ನ್ಯಾಯತೀರ್ಪು ದೇವರದೇ; ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ; ಆಗ ನಾನು ಅದನ್ನು ತೀರಿಸುವೆನು.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
ಇವು ಸಹ ಜ್ಞಾನಿಗಳಿಗೆ ಸಂಬಂಧಪಟ್ಟಿವೆ. ನ್ಯಾಯವಿಚಾರಣೆ ಯಲ್ಲಿ ಪಕ್ಷಪಾತವು ಸರಿಯಲ್ಲ.
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
ದೇವರಾದುಕೊಂಡವರ ನಂಬಿಕೆಗನುಸಾರ ವೂ ಭಕ್ತಿಗನುಸಾರವಾದ ಸತ್ಯದ ತಿಳು ವಳಿಕೆಗನುಸಾರವೂ ದೇವರ ಸೇವಕನಾದ ಯೇಸು ಕ್ರಿಸ್ತನ ಅಪೊಸ್ತಲನಾಗಿರುವ ಪೌಲನೆಂಬ ನನಗೆ
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--
ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ.