ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
Cross references
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು.
ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.
ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನ ಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡ ಕೊಂಡರು; ಸಿಂಹಗಳ ಬಾಯಿ ಕಟ್ಟಿದರು.
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ.