ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
Cross references
ದೇವರು ಹೇಳಿದ ಸ್ಥಳಕ್ಕೆ ಅವರು ಬಂದಾಗ ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ ತನ್ನ ಮಗನಾದ ಇಸಾಕನನ್ನು ಕಟ್ಟಿ ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ನೀನು ನಿನ್ನ ಮಾತುಗಳಿಂದಲೇ ನೀತಿವಂತನಾಗುವಿ ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯಾಗುವಿ ಎಂದು ಹೇಳಿದನು.
ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು;
ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆ
ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು.
ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.