ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Cross references
ಆಗ ಅವನ ಪಟ್ಟಣದಲ್ಲಿರುವ ಹಿರಿಯರೂ ಗೌರವಸ್ಥರೂ ತಮಗೆ ಈಜೆಬೆಲಳು ಕಳುಹಿಸಿದ ಪತ್ರದ ಪ್ರಕಾರವೇ ಮಾಡಿ ದರು.
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
ಅವನು ಹೊಂಚು ಹಾಕುವ ಗ್ರಾಮಗಳ ಸ್ಥಳಗಳಲ್ಲಿ ಕೂತುಕೊಂಡು ಗುಪ್ತವಾದ ಸ್ಥಳಗಳಲ್ಲಿ ನಿರಪರಾಧಿಯನ್ನು ಕೊಲ್ಲು ತ್ತಾನೆ. ಅವನ ಕಣ್ಣುಗಳು ಗತಿಯಿಲ್ಲದವನನ್ನು ಹೊಂಚಿ ನೋಡು ತ್ತವೆ;
ಅವನು ಕುಗ್ಗಿ ಬೊಗ್ಗುತ್ತಾನೆ; ಆದದರಿಂದ ಗತಿಯಿಲ್ಲದವರು ಅವನ ಬಲದಿಂದ ಬೀಳುತ್ತಾರೆ.
ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ.ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ತನ್ನ ಐಶ್ವರ್ಯವನ್ನು ವೃದ್ಧಿಗೊಳಿಸುವದಕ್ಕಾಗಿ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.
ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ.
ಕರ್ತನು ತನ್ನ ಪ್ರಜೆಯಾದ ಪೂರ್ವಿಕರ ಸಂಗಡಲೂ ಅವರ ಅಧಿ ಪತಿಗಳ ಸಂಗಡಲೂ ನ್ಯಾಯತೀರಿಸಲು ಪ್ರವೇಶಿಸು ವನು; ನೀವು ದ್ರಾಕ್ಷೇ ತೋಟವನ್ನು ತಿಂದುಬಿಟ್ಟಿದ್ದೀರಿ; ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ನಾನು ದುಷ್ಟತ್ವದ ತ್ರಾಸುಗಳುಳ್ಳವರನ್ನು ಮೋಸವಾದ ಕಲ್ಲು ಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?
ಅವನ ದೊಣ್ಣೆಗಳಿಂದಲೇ ತನ್ನ ಹಳ್ಳಿಗಳ ಮುಖ್ಯಸ್ಥನನ್ನು ಹೊಡೆದಿದ್ದೀ; ಅವರು ನನ್ನನ್ನು ಚದುರಿಸುವದಕ್ಕೆ ಬಿರುಗಾಳಿಯಂತೆ ಬಂದರು; ಬಡವರನ್ನು ಅಂತರಂಗದಲ್ಲಿ ನುಂಗಿಬಿಡುವ ಹಾಗೆ ಅವರಿಗೆ ಸಂತೋಷವು ಇರುವದು.
ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು;
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು
ಆಗ ಅಧಿಪತಿಯು ಅಧಿಕಾರಿಗಳೊಂದಿಗೆ ಹೋಗಿ ಬಲಾತ್ಕಾರವೇನೂ ಮಾಡದೆ ಅವರನ್ನು ಕರತಂದನು; ಯಾಕಂದರೆ ಜನರು ತಮಗೆ ಕಲ್ಲೆಸೆದಾರು ಎಂದು ಅವರು ಭಯಪಟ್ಟಿದ್ದರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು--
ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.