ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
Cross references
ಅವರು ಮಾರಾಗೆ ಬಂದ ಮೇಲೆ ಮಾರಾದ ನೀರನ್ನು ಕುಡಿಯಲಾರದೆ ಇದ್ದರು; ಯಾಕಂದರೆ ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು ಮಾರಾ ಎಂದು ಕರೆಯಲ್ಪಟ್ಟಿತು.
ಆಗ ಆ ಪಟ್ಟಣದ ಜನರು ಎಲೀಷನಿಗೆ-- ಇಗೋ, ಈ ಪಟ್ಟಣದ ಸ್ಥಳವು ಒಳ್ಳೇದಾಗಿದೆ ಎಂದು ನಮ್ಮ ಒಡೆಯನು ನೋಡುತ್ತಾನೆ; ಆದರೆ ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು ಅಂದರು.
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?
ಆಗ ಅವನು ಹೇಳಿದ್ದೇನಂದರೆ, ಈ ನೀರು ಪೂರ್ವ ಸೀಮೆಗೆ ಹೋಗಿ ಒಣಭೂಮಿಗೆ ಇಳಿದು ಸಮುದ್ರ ಸೇರುವವು; ಸಮುದ್ರ ಸೇರಿದ ಮೇಲೆ ಆ ನೀರು ಸಿಹಿಯಾಗುವದು.
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು.
ಒಳ್ಳೇಮರವು ಕೆಟ್ಟ ಫಲವನ್ನು ಫಲಿಸುವದಿಲ್ಲ; ಇಲ್ಲವೆ ಕೆಟ್ಟಮರವು ಒಳ್ಳೇಫಲವನ್ನು ಫಲಿಸುವದಿಲ್ಲ.
ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.